ಬೆಂಗಳೂರು, (ಮೇ.30): ಕರ್ನಾಟಕದಲ್ಲಿ ಇಂದು ಒಂದೇ ದಿನ 20,378 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 382 ಜನರು ನಿಧನರಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಇಂದು 28,053 ಜನರು ಗುಣಮುಖರಾಗಿದ್ದಾರೆ.
ಇಂದು ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾಗಿ 28,053 ಡಿಸ್ಚಾರ್ಜ್ ಆಗಿದ್ದು, ಇಲ್ಲಿಯವರೆಗೆ ಒಟ್ಟು ಗುಣಮುಖರಾದವರ ಸಂಖ್ಯೆ 22,17,117 ಕ್ಕೆ ಏರಿಕೆಯನ್ನು ಕಂಡಿದೆ. ಸದ್ಯ ರಾಜ್ಯದಲ್ಲಿ 3,42,010 ಸಕ್ರಿಯ ಕೊರೋನಾ ಪಾಸಿಟಿವ್ ಪ್ರಕರಣಗಳು ಇದ್ದು, ಅಗತ್ಯ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ 24 ಗಂಟೆಗಳಲ್ಲಿ 4734 ಪ್ರಕರಣಗಳು ಪತ್ತೆಯಾಗಿದ್ದು, 213 ಜನರು ಸಾವನ್ನಪ್ಪಿದ್ದಾರೆ. ಕೊರೋನಾ ಸೋಂಕಿನಿಂದ ಇಂದು 6078 ಜನರು ಗುಣಮುಖರಾಗಿದ್ದಾರೆ ಎಂದು ತಿಳಿದುಬಂದಿದೆ. ಇದಲ್ಲದೆ ನಗರದಲ್ಲಿ 1,62,625 ಸಕ್ರಿಯ ಪ್ರಕರಣಗಳು ಇವೆ ಎಂದು ಆರೋಗ್ಯ ಇಲಾಖೆಯ ಮಾಹಿತಿ ತಿಳಿಸಿದೆ.
ಇದನ್ನೂ ಓದಿರಿ: ಜೂನ್ನಲ್ಲಿ 10 ಕೋಟಿ ಕೋವಿಶೀಲ್ಡ್ ಡೋಸ್ ಉತ್ಪಾದಿಸಿ ಪೂರೈಸುತ್ತೇವೆ:ಸೀರಮ್ ಇನ್ಸ್ಟಿಟ್ಯೂಟ್
ಜಿಲ್ಲಾವಾರು ಸೋಂಕಿತರ ಸಂಖ್ಯೆ:
ಬಾಗಲಕೋಟೆ 193, ಬಳ್ಳಾರಿ 598, ಬೆಳಗಾವಿ 1171, ಬೆಂಗಳೂರು ಗ್ರಾಮಾಂತರ 392, ಬೆಂಗಳೂರು ನಗರ 4734, ಬೀದರ್ 37, ಚಾಮರಾಜನಗರ 402, ಚಿಕ್ಕಬಳ್ಳಾಪುರ 356, ಚಿಕ್ಕಮಗಳೂರು 671, ಚಿತ್ರದುರ್ಗ 805, ದಕ್ಷಿಣ ಕನ್ನಡ 727, ದಾವಣಗೆರೆ 698, ಧಾರವಾಡ 525, ಗದಗ 289, ಹಾಸನ 2227, ಹಾವೇರಿ 206, ಕಲಬುರಗಿ 107, ಕೊಡಗು 271, ಕೋಲಾರ 341, ಕೊಪ್ಪಳ 365, ಮಂಡ್ಯ 643, ಮೈಸೂರು 1,559, ರಾಯಚೂರು 278, ರಾಮನಗರ 164, ಶಿವಮೊಗ್ಗ 386, ತುಮಕೂರು 773, ಉಡುಪಿ 651, ಉತ್ತರ ಕನ್ನಡ 504, ವಿಜಯಪುರ 198, ಯಾದಗಿರಿಯಲ್ಲಿ 107 ಕೊರೋನಾ ಪ್ರಕರಣಗಳು ದಾಖಲಾಗಿವೆ.
ಇಂದಿನ 30/05/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿhttps://t.co/Gdd1lKa9uW @CMofKarnataka @BSYBJP @mla_sudhakar @drashwathcn @RAshokaBJP @BSBommai @CPBlr @PIBBengaluru @KarnatakaVarthe @PIBBengaluru @BBMPCOMM @BlrCityPolice @blrcitytraffic pic.twitter.com/pmahsbQEYr
— K’taka Health Dept (@DHFWKA) May 30, 2021