ಬೆಂಗಳೂರು(ಜು.9): ರಾಜ್ಯದಲ್ಲಿ ಇಂದು ದಾಖಲೆಯ ಪ್ರಮಾಣದಲ್ಲಿ ಸೋಂಕು ಪತ್ತೆಯಾಗಿದ್ದು, 2313 ಜನರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಇದರೊಂದಿಗೆ 57 ಜನರು ಕೊರೊನಾ ದಾಳಿಗೆ ಜೀವ ಕಳೆದುಕೊಂಡಿದ್ದಾರೆ.
ರಾಜ್ಯದಲ್ಲಿ ಸೋಂಕಿನಿಂದ ಗುಣಮುಖರಾದವರು ಎಷ್ಟು ?
ರಾಜ್ಯದಲ್ಲಿ ಇಂದು ಒಟ್ಟು 1003 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ಇಲ್ಲಿಯವರೆಗೆ 13,836 ಜನರು ಸೋಂಕಿನಿಂದ ಪಾರಾಗಿ ಮನೆ ಸೇರಿದ್ದಾರೆ. ಇನ್ನು ಈ ಸೋಂಕಿಗೆ ಒಳಗಾಗಿ ಆಸ್ಪತ್ರೆಯಲ್ಲಿ 19,035 ಜನರು ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.
ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕು ?
ಇಂದು ದಾಖಲಾದ ಕೊರೊನಾ ಪ್ರಕರಣಗಳನ್ನು ಜಿಲ್ಲಾವಾರು ನೋಡುತ್ತ ಹೋದರೆ ಬೆಂಗಳೂರು 1447, ದಕ್ಷಿಣಕನ್ನಡ 139, ವಿಜಯಪುರ 89, ಬಳ್ಳಾರಿ 66, ಕಲಬುರಗಿ 58, ಯಾದಗಿರಿ 51, 51, ಮೈಸೂರು 51, ಧಾರವಾಡ 50, ಹಾವೇರಿ 42, ಉಡುಪಿ 34, ಉತ್ತರಕನ್ನಡ 33, ಕೊಡಗು 33, ಮಂಡ್ಯ 31, ರಾಯಚೂರು 25, ರಾಮನಗರ 23, ದಾವಣಗೆರೆ 21, ಬೀದರ್ 19, ಗದಗ 19, ಬೆಳಗಾವಿ 15, ಚಿಕ್ಕಬಳ್ಳಾಪುರ 12, ತುಮಕೂರು 10, ಕೋಲಾರ 9, ಚಾಮರಾಜನಗರ 9, ಕೊಪ್ಪಳ 7, ಹಾಸನ 6, ಶಿವಮೊಗ್ಗ 6, ಬಾಗಲಕೋಟೆ 6, ಬೆಂಗಳೂರು ಗ್ರಾಮಾಂತರ 1, ಚಿಕ್ಕಮಗಳೂರು 1 ಸೋಂಕಿನ ಪ್ರಖರಣಗಳು ಪತ್ತೆಯಾಗಿವೆ.
ಇಂದಿನ ಪತ್ರಿಕಾ ಪ್ರಕಟಣೆ 10/07/2020.
ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಕೆಳಗೆ ಈ ಲಿಂಕನ್ನು ಕ್ಲಿಕ್ ಮಾಡಿ.https://t.co/pWMtpOw9bT @BMTC_BENGALURU @NammaBESCOM @tv9kannada @publictvnews @suvarnanewstv @timesofindia @prajavani @udayavani_web @TV5kannada @Vijaykarnataka @VVani4U pic.twitter.com/kU7Fp2bJKv— K’taka Health Dept (@DHFWKA) July 10, 2020