ಹುಬ್ಬಳ್ಳಿಗೆ ಪ್ರಧಾನಿ ಆಗಮನ ಹಿನ್ನೆಲೆ, ಹೆಚ್ಚುವರಿ ಪೊಲೀಸ್ ಬಂದೋಬಸ್ತ್​​​​​

additional-police-deployment-in-the-background-of-prime-ministers-arrival-in-hubli

ಹುಬ್ಬಳ್ಳಿ: ವಾಣಿಜ್ಯ ನಗರಿಯಲ್ಲಿ ಆಯೋಜನೆಗೊಂಡಿರುವ 26 ನೇಯ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಈ ಕುರಿತಂತೆ ಮಾಧ್ಯಮದೊಂದಿಗೆ ಮಾತನಾಡಿದ ಎಡಿಜಿಪಿ ಅಲೋಕ್‌ ಕುಮಾರ್‌, ಇಂದು ಹುಬ್ಬಳ್ಳಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಎಸ್​​ಪಿಜಿ ತನ್ನ ಸುಪರ್ದಿಗೆ ಪಡೆದಿದೆ. ಏರ್​​ಪೋರ್ಟ್​ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ಬಂದೋಬಸ್ತ್​​​​​ ಕೈಗೊಳ್ಳಲಾಗಿದೆ. ಪ್ರಧಾನಿ ಆಗಮಿಸುವ ಒಂದು ಗಂಟೆ ಮುನ್ನ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗುತ್ತದೆ. 60 ಪಿಐ, 18 ಕೆಎಸ್‌ಆರ್‌ಪಿ, ಗರುಡಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಸುಗಮ ಸಂಚಾರಕ್ಕೆ ಬೆಂಗಳೂರಿನಲ್ಲಿ ಟ್ರಾಫಿಕ್‌ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿರಿ: ಭಾರತದ ಮುಸ್ಲಿಮರು ಭಯಪಡುವ ಅಗತ್ಯ ಇಲ್ಲ; ಆದರೆ ಒಂದು ಸಲಹೆ-ಮೋಹನ್‌ ಭಾಗವತ್‌

ಪ್ರಧಾನಿ ನರೇಂದ್ರ ಮೋದಿಯವರು ಬರುವ ಮಾರ್ಗದುದ್ದಕ್ಕೂ ಎಸ್ಕಾರ್ಟ್‌ ಸಿಬಂದಿ ನಿಯೋಜನೆ ಮಾಡಲಾಗಿದೆ. ಯಾವುದೇ ಸಂಘಟನೆ ಅಥವಾ ಯಾರಾದರು ಮನವಿ ಕೊಡುವವರಿದ್ದರೆ ಪೊಲೀಸ್‌ ಕಮೀಷನರ್‌/ಡಿಸಿಗೆ ಮನವಿ ಕೊಡಬಹುದು ಎಂದು ಹುಬ್ಬಳ್ಳಿಯಲ್ಲಿ ಎಡಿಜಿಪಿ ಅಲೋಕ್‌ ಕುಮಾರ್‌ ತಿಳಿಸಿದ್ದಾರೆ.

ಇದನ್ನೂ ಓದಿರಿ: National Youth Festival: ಇಂದು ಗಂಡುಮೆಟ್ಟಿದ ನಾಡು ಹುಬ್ಬಳ್ಳಿಗೆ ಪ್ರಧಾನಿ ಮೋದಿ

LEAVE A REPLY

Please enter your comment!
Please enter your name here