ಬೆಂಗಳೂರು(ಜು.29): ರಾಜ್ಯದಲ್ಲಿ ಮಹಾಮಾರಿಯ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇಂದು 5503 ಪ್ರಖರಣಗಳು ದಾಖಲಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಇಲ್ಲಿಯವೆರೆಗೆ ಸೋಂಕಿಗೆ ಒಳಗಾದವರ ಸಂಖ್ಯೆ 1,12,504 ಕ್ಕೆ ತಲುಪಿದೆ. ಇದರೊಂದಿಗೆ ಕೋವಿಡ್-19 ರ ಸೋಂಕಿನಿಂದ 92 ಜನರು ಇಂದು ಸಾವನ್ನಪ್ಪಿದ್ದು, ಆತಂಕವನ್ನು ಸ್ವಲ್ಪ ಮಟ್ಟಿಗೆ ಹೆಚ್ಚಿಸಿದೆ.
ರಾಜಧಾನಿಯಲ್ಲಿ ಇಂದು 2270 ಜನರಿಗೆ ಕೊರೊನಾ ಸೋಂಕು ಇರುವುದು ದೃಡ ಪಟ್ಟಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ಇಲ್ಲಿಯವರೆಗೆ ದಾಖಲಾದ ಸೋಂಕಿತರ ಸಂಖ್ಯೆ 50 ಸಾವಿರದ ಗಡಿಯನ್ನುದಾಟಿದೆ.
ಈ ನಡುವೆ, ರಾಜ್ಯದಲ್ಲಿ ಇಂದು 2397 ಜನರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇದರೊಂದಿಗೆ ಇಲ್ಲಿಯವರೆಗೆ ರಾಜ್ಯದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 42,901. ಇನ್ನು ಸೋಂಕಿನಿಂದ ಬಳಲುತ್ತಿರುವ 67,448 ಜನರು ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.
ಇಂದಿನ 29/07/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@CMofKarnataka @BSYBJP @DVSadanandGowda @SureshAngadi_ @sriramulubjp @drashwathcn @BSBommai @mla_sudhakar @iaspankajpandey @Tejasvi_Surya @BBMP_MAYOR @BBMPCOMMhttps://t.co/27I3lCxTkR pic.twitter.com/GY8pXDzzLc
— K’taka Health Dept (@DHFWKA) July 29, 2020