ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ (104) ಇಂದು ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಜಯದೇವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ್ದಾರೆ.
ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಗಾಂಧೀವಾದಿ, ಪತ್ರಕರ್ತ, ಸಮಾಜ ಸೇವಕರು, ನಾಡುನುಡಿ ಜನಪರ ಕಾಳಜಿಗಳಿಗೆ ಸದಾ ಧ್ವನಿಯಾಗಿದ್ದ ಶತಾಯುಷಿ ಹೆಚ್.ಎಸ್.ದೊರೆಸ್ವಾಮಿ ವಿಧಿವಶರಾದ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತಾ, ದೇವರು ಅವರ ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೋರುತ್ತೇನೆ.
— B.S. Yediyurappa (@BSYBJP) May 26, 2021
ಕಳೆದ ಕೆಲವು ದಿನಗಳ ಹಿಂದಷ್ಟೇ ಕೊರೊನಾ ವೈರಸ್ ಗೆ ತುತ್ತಾಗಿ, ಅದರೊಂದಿಗೆ ಹೋರಾಡಿ ಗೆದ್ದು ಬಂದಿದ್ದರು. ಆದರೆ ಹೃದಯ ಸಂಬಂಧಿ ಅನಾರೋಗ್ಯಕ್ಕೆ ತುತ್ತಾಗಿ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ಮಧ್ಯಾಹ್ನ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಎಚ್.ಎಸ್.ದೊರೆಸ್ವಾಮಿ ಅವರ ಪೂರ್ತಿ ಹೆಸರು ಹಾರೊಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿ. ಏಪ್ರಿಲ್ 10, 1918 ರಲ್ಲಿ ಜನಿಸಿದ್ದ ಅವರು ಬ್ರಿಟಿಷರ ವಿರುದ್ಧ ತೊಡೆ ತಟ್ಟಿ ಹೋರಾಟಕ್ಕೆ ದುಮುಕಿದ್ದರು. ಆಗಿನ ಜನಪ್ರೀಯ ಪತ್ರಿಕೆ ‘ಪೌರವಾಣಿ’ಯ ವರದಿಗಾರರಾಗಿ ಪ್ರಸಿದ್ದಿ ಪಡೆದಿದ್ದರು.
ಇದನ್ನೂ ಓದಿರಿ: ಸರ್ಕಾರಿ ಶಾಲೆಯ ಬಡ ಮಕ್ಕಳಿಗೆ ಉಚಿತ ಸ್ಮಾರ್ಟ್ ಫೋನ್: ಸರ್ಕಾರದ ಚಿಂತನೆ