ಕಂದಹಾರ್: ಅಫ್ಘಾನಿಸ್ತಾನದಲ್ಲಿ ನಡೆದ ಸಂಘರ್ಷದಲ್ಲಿ ಭಾರತದ ಪ್ರಸಿದ್ಧ ಫೋಟೋ ಜರ್ನಲಿಸ್ಟ್ ಡ್ಯಾನಿಶ್ ಸಿದ್ಧಿಕಿ ಅವರನ್ನು ಹತ್ಯೆ ಮಾಡಲಾಗಿದೆ. ಅಫ್ಘಾನ್ನ ಕಂದಹಾರ್ ನಗರದಲ್ಲಿ ನಡೆಯುತ್ತಿರುವ ಸಂಘರ್ಷವನ್ನು ವರದಿ ಮಾಡಲು ತೆರಳಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ.
ಡ್ಯಾನಿಶ್ ಸಿದ್ಧಿಕಿ ಸಾವಿಗೆ ಅಫ್ಘಾನಿಸ್ತಾನದ ಭಾರತೀಯ ರಾಯಭಾರಿ ಫರೀದ್ ಮಮುಂಡ್ಜೆ ಸಂತಾಪ ಸೂಚಿಸಿದ್ದಾರೆ. ನನ್ನ ಸ್ನೇಹಿತನಂತಿದ್ದ ಡ್ಯಾನಿಶ್ ಸಿದ್ಧಿಕಿಯನ್ನು ನಿನ್ನೆ ಹತ್ಯೆ ಮಾಡಲಾಗಿದೆ. ಭಾರತೀಯ ಪತ್ರಕರ್ತನಾಗಿದ್ದ ಈತ ಪುಲಿಟ್ಜೆರ್ ಪ್ರಶಸ್ತಿಯನ್ನು ಪಡೆದಿದ್ದರು. ಅಫ್ಘಾನ್ ಸೇನಾಪಡೆಯ ಜೊತೆಗೆ ವರದಿಗೆ ಹೋಗಿದ್ದಾಗ ತಾಲಿಬಾನ್ ಉಗ್ರರ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಆತ ಕಬೂಲ್ಗೆ ತೆರಳುವ 2 ವಾರಗಳಿಗೂ ಮೊದಲು ನಾನು ಆತನನ್ನು ಭೇಟಿಯಾಗಿದ್ದೆ. ಆತನ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿರಿ: ಸ್ವಾತಂತ್ರ್ಯ ಬಂದು 74 ವರ್ಷಗಳ ಬಳಿಕ ಕೊನೆಗೂ ವಿದ್ಯುತ್ ಸಂಪರ್ಕ ಪಡೆದ ಕಾಶ್ಮೀರದ ಹಳ್ಳಿ