ನವದೆಹಲಿ: ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಅಧಿವೇಶನದಲ್ಲೂ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಪ್ರತಿಧ್ವನಿಸಿದೆ. ಅಧಿವೇಶದಲ್ಲಿ ಕನ್ನಡಿಗರು ಮಹಾರಾಷ್ಟ್ರದ ಜನರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಎನ್ ಸಿಪಿ ಸಂಸದೆ ಸುಪ್ರಿಯಾ ಸುಲೆ ಹೇಳಿದ್ದಾರೆ.
ಇಂದು ಅಧಿವೇಶನದಲ್ಲಿ ಸುಪ್ರಿಯಾ ಸುಲೆ ಮಾತನಾಡುತ್ತ, ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದಲ್ಲಿ ಮೂಗು ತುರಿಸಿದ್ದಾರೆ. ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕರ್ನಾಟಕದ ಸಿಎಂ ಹೇಳಿಕೆ ನೀಡುತ್ತಿದ್ದಾರೆ. ಕರ್ನಾಟಕದಲ್ಲಿ ಮಹಾರಾಷ್ಟ್ರದವರ ಮೇಲೆ ಹಲ್ಲೆ ನಡೆದಿದೆ. ಇದಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಕೇಳಿದ್ದಾರೆ.
ಇದನ್ನೂ ಓದಿರಿ: ದೆಹಲಿಯಲ್ಲಿ ಕೇಜ್ರಿವಾಲ್ ಮ್ಯಾಜಿಕ್; 15 ವರ್ಷದ ಬಿಜೆಪಿ ಹಿಡಿತ ಅಂತ್ಯ
For the past 10 days, a new issue has cropped up in Maharashtra. The CM of our neighbouring state, Karnataka has been speaking nonsense. Yesterday, people of Maharashtra wanted to go to the Karnataka border but they were thrashed: NCP MP Supriya Sule in Lok Sabha pic.twitter.com/cSzBFtOVrG
— ANI (@ANI) December 7, 2022
ಸುಪ್ರಿಯಾ ಈ ಹೇಳಿಕೆ ಬರುತ್ತಿದ್ದಂತೆ ಶಿವಕುಮಾರ್ ಉದಾಸಿಯವರು ಮದ್ಯ ಪ್ರವೇಶಿಸಿದ್ದಾರೆ. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದವು ಈಗಾಗಲೇ ಸುಪ್ರೀಂಕೋರ್ಟ್ ನಲ್ಲಿದೆ. ಹೀಗಾಗಿ ಅಧಿವೇಶನದಲ್ಲಿ ಈ ಕುರಿತು ಮಾತ್ರನಾಡುವುದು ಸರಿಯಲ್ಲ ಎಂದು ಹೇಳಿದರು. ಇದಕ್ಕೆ ಲೋಕಸಭಾ ಸ್ಪೀಕರ್ ಸಹ ಸಹಮತ ವ್ಯಕ್ತಪಡಿಸಿದ್ದು, ಗಡಿ ವಿವಾದ ಕುರಿತಂತೆ ಚರ್ಚೆಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿರಿ: ಕರ್ನಾಟಕ ಬಸ್ಗೆ ಮತ್ತೆ ಮಸಿ; ಮುಂದುವರಿದ ಎಂಇಎಸ್ ಪುಂಡಾಟಿಕೆ