Road Accident: ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಪಲ್ಟಿಯಾದ ಸ್ಕೂಲ್ ಬಸ್

mudigere-5-students-injured-as-college-bus-overturns

ಚಿಕ್ಕಮಂಗಳೂರು: ಮೂಡಿಗೆರೆ ತಾಲೂಕಿನ ಮುತ್ತಿಗೆಪುರದ ಹರೀಶ್ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ದೇವರಮನೆ ಗುಡ್ಡದ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸದಿಂದ ಹಿಂತಿರುಗುವಾಗ ರಸ್ತೆಯ ಪಕ್ಕದಲ್ಲಿದ್ದ ಕರೆಂಟ್ ಕಂಬಕ್ಕೆ ಡಿಕ್ಕಿಯಾಗಿ ಬಸ್ ಪಲ್ಟಿಯಾಗಿದೆ.

ಪ್ರವಾಸದಿಂದ ಹಿಂತಿರುಗಿ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಐವರು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ನೀಡಲಾಗಿದೆ.

ಪ್ರವಾಸಕ್ಕೆ ತೆರಳಿದ್ದ ಬಸಿಲಿನಲ್ಲಿ 10 ವಿದ್ಯಾರ್ಥಿಗಳಿದ್ದರು ಎಂಬ ಮಾಹಿತಿ ಬಂದಿದ್ದು, ಐವರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ. ಘಟನೆ ನಡೆದ ಸ್ಥಳಕ್ಕೆ ಬಣಕಲ್ ಠಾಣೆ ಪೊಲೀಸರು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿರಿ: ನೇಪಾಳದ ಘೋರ ದುರಂತ: ಐವರು ಭಾರತೀಯರ ಸಾವು

LEAVE A REPLY

Please enter your comment!
Please enter your name here