ಕಲಬುರಗಿ: ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ಕಲಬುರಗಿ ಜಿಲ್ಲೆಯಲ್ಲಿನ ಹಲವು ಅಭಿವೃದ್ಧಿ ಕಾರ್ಯ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳ ಬಂಜಾರ ಸಮುದಾಯಗಳ 51,900 ಮಂದಿಗೆ ಹಕ್ಕು ಪತ್ರಗಳನ್ನು ವಿತರಿಸಿ ಗಿನ್ನಿಸ್ ದಾಖಲೆ ನಿರ್ಮಿಸಿದ್ದಾರೆ.
ರಾಜ್ಯ ಸರ್ಕಾರ ಹಕ್ಕುಪತ್ರಗಳ ಫಲಾನುಭವಿಗಳನ್ನು ಗುರುತಿಸಿ ಹಕ್ಕು ಪತ್ರಗಳನ್ನು ನೀಡುವ ಕಾರ್ಯವನ್ನು ಆರು ತಿಂಗಳ ಹಿಂದೆ ಆರಂಭಿಸಿತ್ತು. ಹಕ್ಕು ಪತ್ರ ದಾಖಲಾತಿಯನ್ನು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಉಚಿತವಾಗಿ ದಾಖಲಾತಿ ಮಾಡಲಾಗುತ್ತದೆ. ತಾಂಡಾ ಕುಟುಂಬದವರು ವಾಸಿಸುತ್ತಿರುವ ಸ್ಥಳಗಳನ್ನು ಕಂದಾಯ ಗ್ರಾಮಗಳೆಂದು ಗುರುತಿಸಲಾಗಿದ್ದು ಈ ಮೂಲಕ ಗ್ರಾಮದ ಜನರು ಸರ್ಕಾರದ ಪ್ರಯೋಜನ ಪಡೆದುಕೊಳ್ಳಬಹುದು ಎಂದರು.
ಇದನ್ನೂ ಓದಿರಿ: ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕದಲ್ಲಿ ವಿಕಾಸ್ ಪರ್ವ: ಪ್ರಧಾನಿ ನರೇಂದ್ರ ಮೋದಿ