ನವದೆಹಲಿ: ಭಾರತ ತಂಡದ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ರಿಷಭ್ ಪಂತ್ ಅವರು ಕಾರು ಅಪಘಾತದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಿಷಭ್ ಪಂತ್ ಅವರು ದೆಹಲಿಯಿಂದ ಉತ್ತರಾಖಂಡಕ್ಕೆ ಮರಳುತ್ತಿದ್ದ ವೇಳೆ ವಿಭಜಕಕ್ಕೆ ಡಿಕ್ಕಿ ಹೊಡೆದಿದಿದೆ. ಅವರು ಚಲಾಯಿಸುತ್ತಿದ್ದ ಮರ್ಸಿಡಿಸ್ ಕಾರು ವೇಗವಾಗಿದ್ದ ಕಾರಣ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಹೊಡೆದಿದೆ. ಈ ಸಮಯದಲ್ಲಿ ಕಾರು ಹೊತ್ತಿ ಉರಿದಿದೆ.
ರಿಷಭ್ ಪಂತ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಹಣೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಆಸ್ಪತ್ರೆಯ ಮಾಹಿತಿಯ ಪ್ರಕಾರ ಸದ್ಯ ರಿಷಬ್ ಪಂತ್ಸ್ಥಿತಿ ಸ್ಥಿರವಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿರಿ: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಪಂಚಭೂತಗಳಲ್ಲಿ ಲೀನ